ಮೈದುಂಬಿದ ಕಬಿನಿಗೆ ಮುಖ್ಯಮಂತ್ರಿಗಳಿಂದ ಬಾಗಿನ: ದಿನಾಂಕ‌ ನಿಗದಿ
ಮೈದುಂಬಿದ ಕಬಿನಿಗೆ ಮುಖ್ಯಮಂತ್ರಿಗಳಿಂದ ಬಾಗಿನ: ದಿನಾಂಕ‌ ನಿಗದಿ

ಮೈಸೂರು. (ಜು.27): ಮೈಸೂರು ಜಿಲ್ಲೆ ಸೇರಿದಂತೆ ಲಕ್ಷಾಂತರ ಜನರ ಜೀವನಾಡಿಯಾಗಿರುವ ಕಬಿನಿ ಜಲಾಶಯ ಮೈದುಂಬಿಕೊಂಡು ಕಂಗೊಳಿಸುತಿದ್ದು  ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಜಲಾಶಯಕ್ಕೆ ಬಾಗಿನ ಸಮರ್ಪಿಸುತಿದ್ದಾರೆ. ಮಂತ್ರಿ ಮಹೋದಯರು ಜನಪ್ರತಿನಿಧಿಗಳು,ಅಧಿಕಾರಿಗಳು ಉಪಸ್ಥಿತರಿಲಿದ್ದಾರೆ.

ಕರ್ನಾಟಕ ಸರ್ಕಾರ, ಜಲಸಂಪನ್ಮೂಲ ಇಲಾಖೆ ಹಾಗೂ ಕಾವೇರಿ ನೀರಾವರಿ ನಿಗಮ ನಿಯಮಿತದ ವತಿಯಿಂದ  ಜುಲೈ 29 ರಂದು ಮಧ್ಯಾಹ್ನ 3 ಗಂಟೆಗೆ ಹೆಚ್ ಡಿ ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿ "ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 

ಕಾರಯಕ್ರಮದಲ್ಲಿ  ಉಪ ಮುಖ್ಯಮಂತ್ರಿಗಳು ಮತ್ತು ಜಲಸಂಪನ್ಮೂಲ ಸಚಿವರಾದ ಡಿ ಕೆ ಶಿವಕುಮಾರ್, ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ ಕುಮಾರಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ.ಹೆಚ್.ಸಿ ಮಹದೇವಪ್ಪ,  ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರು ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ವೆಂಕಟೇಶ್, ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಹಾಗೂ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಅವರು ಘನ ಉಪಸ್ಥಿತಿ ಇರಲಿದ್ದಾರೆ.

ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್ ಸಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಸದಸ್ಯರು ಹಾಗೂ ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ ರಮೇಶ್ ಬಂಡಿ ಸಿದ್ದೇಗೌಡ, ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಸದಸ್ಯರು ಹಾಗೂ ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ನ ಅಧ್ಯಕ್ಷರಾದ ಸಿ ಪುಟ್ಟರಂಗ ಶೆಟ್ಟಿ.

ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ.ಪುಷ್ಪ ಅಮರನಾಥ್, ಚಾಮರಾಜನಗರ ಲೋಕಸಭಾ ಕ್ಷೇತ್ರದ ಶಾಸಕರಾದ ಸುನಿಲ್ ಬೋಸ್ ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಶಾಸಕರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್ ಶ್ರೀವತ್ಸ, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ ಹರೀಶ್ ಗೌಡ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡ.

ವಿಧಾನ ಪರಿಷತ್ನ ಸದಸ್ಯರುಗಳಾದ ಹೆಚ್.ವಿಶ್ವನಾಥ್, ಡಾ.ಡಿ.ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ, ಯತಿಂದ್ರ.ಎಸ್ ಮತ್ತು ವಿವೇಕಾನಂದ.ಎಸ್, ಕೊಳ್ಳೇಗಾಲ  ವಿಧಾನಸಭಾ  ಕ್ಷೇತ್ರದ ಶಾಸಕರಾದ ಎ ಆರ್ ಕೃಷ್ಣಮೂರ್ತಿ, ಹನೂರು   ವಿಧಾನಸಭಾ ಕ್ಷೇತ್ರದ ಶಾಸಕರಾದ ಎಂ ಆರ್ ಮಂಜುನಾಥ್ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಣೇಶ್ ಪ್ರಸಾದ್ ಅವರು ಉಪಸ್ಥಿತರಿರಲಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

others

HL

others

HL

education

HL

others

HL

others

HL

crime

HL

crime

HL

crime

HL

crime

HL

politics

HL

crime

HL

others

HL

crime

HL

others

HL

others

HL

crime

HL

others

HL

others

HL

others

HL

others

HL

crime

HL

education

HL

crime

HL

crime

HL

others

HL

crime

HL

education

HL

others

HL

others