Doddaballapura: ಹೊಸಹಳ್ಳಿ ಗ್ರಾಪಂ ಅಧ್ಯಕ್ಷೆಯಾಗಿ ನಾಗರತ್ನಮ್ಮ ಆಯ್ಕೆ..!
Doddaballapura: ಹೊಸಹಳ್ಳಿ ಗ್ರಾಪಂ ಅಧ್ಯಕ್ಷೆಯಾಗಿ ನಾಗರತ್ನಮ್ಮ ಆಯ್ಕೆ..!

ದೊಡ್ಡಬಳ್ಳಾಪುರ, (ಸೆ.05); ವರಲಕ್ಷ್ಮೀ ಅವರ ರಾಜೀನಾಮೆಯಿಂದ ತೆರವಾಗಿ ತಾಲೂಕಿನ ಹೊಸಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆದಿದೆ‌.

ಚುನಾವಣೆ ಅಧಿಕಾರಿ ಕೃಷಿ ಇಲಾಖೆ ಸಹಾಯ ನಿರ್ದೇಶಕ ರಾಘವೇಂದ್ರ ಹಾಗೂ ಸಹಾಯಕ ಚುನಾವಣೆ ಅಧಿಕಾರಿ ಪಿಡಿಒ ರಂಗಧಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆ ನಡೆಸಲಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಬ್ಬರು ನಾಮಪತ್ರ ಸಲ್ಲಿಸಿದ್ದರು.

24 ಮಂದಿ ಸದಸ್ಯತ್ವ ಬಲದ ಗ್ರಾಮಪಂಚಾಯಿತಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ನಾಗರತ್ನಮ್ಮ ಹಾಗೂ ನಾಗವೇಣಿ ನರಸಿಂಹಮೂರ್ತಿ ಸ್ಪರ್ಧಿಸಿದ್ದು, ನಾಗವೇಣಿ ನರಸಿಂಹಮೂರ್ತಿ 11 ಮತಗಳನ್ನು ಪಡೆದರೆ, ನಾಗರತ್ನಮ್ಮ 13 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಈ ಮುಂಚೆ ಕಾಂಗ್ರೆಸ್ ಬೆಂಬಲಿತರಾದ ವರಲಕ್ಷ್ಮೀ ರಾಜೀನಾಮೆಯಿಂದ ತೆರವಾದ ಕಾರಣ ನಡೆದ ಅಧ್ಯಕ್ಷ ಸ್ಥಾನದ ಈ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ನಾಗರತ್ನಮ್ಮ ಗೆಲುವನ್ನು ಸಾಧಿಸುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ನಾಗರತ್ನಮ್ಮ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಬಿಜೆಪಿ ಮುಖಂಡರಾದ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಸೇರಿದಂತೆ ಸ್ಥಳೀಯ ಮುಖಂಡರು ಅಭಿನಂದನೆ ಸಲ್ಲಿಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....<!--

Latest News

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

others

HL

politics

HL

others

HL

crime

HL

politics

HL

economy

HL

health