ದೊಡ್ಡಬಳ್ಳಾಪುರ ಕರವೇ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕರ ಮಾರ್ಗದರ್ಶನ ಸದಾ ಸ್ಮರಣೀಯವೆಂದ ಸಂಸ್ಥಾಪಕ ಅಧ್ಯಕ್ಷ ನಂಜಪ್ಪ
ದೊಡ್ಡಬಳ್ಳಾಪುರ ಕರವೇ ಕಚೇರಿಯಲ್ಲಿ ಶಿಕ್ಷಕರ ದಿನಾಚರಣೆ: ಶಿಕ್ಷಕರ ಮಾರ್ಗದರ್ಶನ ಸದಾ ಸ್ಮರಣೀಯವೆಂದ ಸಂಸ್ಥಾಪಕ ಅಧ್ಯಕ್ಷ ನಂಜಪ್ಪ

ದೊಡ್ಡಬಳ್ಳಾಪುರ, (ಸೆ.05): ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆವತಿಯಿಂದ ಇಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕರವೇ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅಚರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷ ಎ ನಂಜಪ್ಪ, ಶಿಕ್ಷಕರು ಮಕ್ಕಳ ಹೃದಯದಲ್ಲಿ ಸದಾ ಇರುತ್ತಾರೆ. ಮಕ್ಕಳ ಮನಸ್ಸಿನಿಂದ ಶಿಕ್ಷಕರನ್ನು ತೆಗೆಯಲು ಸಾಧ್ಯವಿಲ್ಲ. ಆ ದಿಸೆಯಲ್ಲಿ ಶಿಕ್ಷಕರೇ ದೇವರು ಎಂದು ತಿಳಿಸಿದರು.

ಅಲ್ಲದೆ ಶಿಕ್ಷಕರು ಮಕ್ಕಳಲ್ಲಿ ಹೆಚ್ಚಿನ ಪ್ರಭಾವ ಬೀರುತ್ತಾರೆ. ಶಿಕ್ಷಕರ ಪ್ರತಿಯೊಂದು ಗುಣವು ಮಕ್ಕಳ ಮೇಲೆ ಪರಿಣಾಮ ಬೀರುತ್ತದೆ. ಶಿಕ್ಷಕರ ಮಾರ್ಗದರ್ಶನ ಸದಾ ಸ್ಮರಣೀಯವಾಗಿದೆ ಎಂದರು.

ಈ ವೇಳೆ ರಾಜ್ಯ ಸಮಿತಿ ಯುವಕ ಘಟಕದ ಅಜಯ್, ಗಂಗರಾಜು, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಯುವ ಘಟಕದ ಜಿಲ್ಲಾಧ್ಯಕ್ಷ ಫಣೀಶ್, ಪ್ರಧಾನ ಕಾರ್ಯದರ್ಶಿ ನವೀನ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಶಶಿಕಲಾ, ಪ್ರಧಾನ ಕಾರ್ಯದರ್ಶಿ ರೇಷ್ಮಾಖಾನಂ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷೆ ಕಾವ್ಯ, ಉಪಾಧ್ಯಕ್ಷೆ ರಾಗಿಣಿ, ಪದ್ಮಾವತಿ ಮತ್ತಿತರರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ....

Latest News

HL

others

HL

crime

HL

others

HL

others

HL

crime

HL

others

HL

others

HL

others

HL

art

HL

crime

HL

education

HL

others

HL

others

HL

art

HL

education

HL

crime

HL

others

HL

others

HL

politics

HL

others

HL

politics

HL

crime

HL

crime

HL

others

HL

politics

HL

others

HL

crime

HL

politics

HL

economy

HL

health