ದೊಡ್ಡಬಳ್ಳಾಪುರ: ತಾಲ್ಲೂಕಿನ ಸರ್ಕಾರಿ ಪ್ರೌಢಶಾಲೆ ಅರಳು ಮಲ್ಲಿಗೆಯ ವಿದ್ಯಾರ್ಥಿನಿ ಮೀನಾ.ಎಂ., ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇದೇ ವೇಳೆ ಇದೇ ಶಾಲೆಯ ವಿದ್ಯಾರ್ಥಿನಿಯರಾದ ತೇಜಸ್ವಿನಿ.ಎಂ ಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದರೆ, ತಾಲೂಕು ಮಟ್ಟದ ಕೀಡಾಕೂಟದಲ್ಲಿ 1500 ಮೀಟರ್ ಓಟದ ವಿಭಾಗದಲ್ಲಿ ಲಕ್ಷ್ಮಿ ತೃತೀಯ ಸ್ಥಾನ ಪಡೆದಿದ್ದಾರೆ.
ವಿಜೇತರಾಗಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳನ್ನು ಶಾಲೆಯ ಮುಖ್ಯಶಿಕ್ಷಕಿ ಸ್ವರ್ಣಗೌರಿ, ಸಹ ಶಿಕ್ಷಕರಾದ ಎಂ ಬೈರೇಗೌಡ ಹಾಗೂ ಸಹ ಶಿಕ್ಷಕರು ಅಭಿನಂದಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ....
Latest News
literature
politics
literature
crime
others